ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ.
ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

