ಕರಾವಳಿಯಲ್ಲಿ ಸಮುದ್ರ ಪ್ರಕ್ಷುಬ್ಧತೆಯಿಂದ ಹೆಚ್ಚಿನ ಗಾಳಿ ಮಳೆಯ ಸಾಧ್ಯತೆ.
ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ.ಬೆಂಗಳೂರು ಇವರ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರಗಳ ಕಾಲ ಸಮುದ್ರ ಪ್ರಕ್ಷುಬ್ದತೆಯಿಂದ ಇದು ಈ ದಿನಗಳಲ್ಲಿ ಹೆಚ್ಚಿನ ಗಾಳಿ ಮಳೆ (ಗಂಟೆಗೆ ಸುಮಾರು 45 – 55 ಕಿ.ಮೀ) ಬರುವ ಸಾಧ್ಯತೆಯಿದ್ದು ಹಾಗೂ ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.
ಈಗಾಗಲೇ ಮೀನುಗಾರಿಕೆಗೆ ಹೋಗಿ ಸಮುದ್ರದಲ್ಲಿರುವವರು ಸುರಕ್ಷಿತ ದಡ ಸೇರುವುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

