ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವಂಚಿತರಿಗೆ ಅ.31ರ ವರೆಗೆ ಅವಕಾಶ ಕಲ್ಪಿಸಿದ ಜಿಲ್ಲಾಡಳಿತ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ 22 ಸೆಪ್ಟೆಂಬರ್ 2025 ರಂದು ಪ್ರಾರಂಭಿಸಿರುತ್ತದೆ. ಈ ಪೈಕಿ ಸುಮಾರು ತಾಲೂಕಿನಲ್ಲಿ ಸಮೀಕ್ಷೆ ಪೂರ್ಣಗೊಂಡಿರುತ್ತದೆ ಅದಾಗಿಯೂ ಸಮೀಕ್ಷೆ ಬಾಕಿ ಇರುವ ಸಾರ್ವಜನಿಕರು ರಾಜ್ಯ ಮಟ್ಟದ ಸಹಾಯವಾಣಿ ಸಂಖ್ಯೆ: 8050770004, ಜಿಲ್ಲಾ ಮಟ್ಟದ ಸಹಾಯವಾಣಿ 0820-2574881, ಉಡುಪಿ/ಬ್ರಹ್ಮಾವರ/ ಕಾಪು ತಾಲೂಕು ಮಟ್ಟದ ಸಹಾಯವಾಣಿ ಸಂಖ್ಯೆ: 0820-2520739, ಬೈಂದೂರು/ಕುಂದಾಪುರ ತಾಲೂಕು ಮೊ.ನಂ: 9972294198 ಮತ್ತು ಕಾರ್ಕಳ-ಹೆಬ್ರಿ ತಾಲೂಕು ಸಹಾಯವಾಣಿ ಸಂಖ್ಯೆ: 08258-298610 ಗೆ ಕರೆಮಾಡುವ ಮೂಲಕ ತಮ್ಮ ಸ್ಥಳೀಯ ಪಂಚಾಯತ್/ ಪುರಸಭೆ/ ನಗರಸಭೆ ಅಥವಾ ಪಟ್ಟಣ ಪಂಚಾಯತಿಗೆ ತೆರಳಿ ಅಥವಾ ತಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ನಲ್ಲಿ https://kscbcselfdeclaration.karnataka.gov.in ಲಿಂಕ್ ಬಳಸಿ ದಿನಾಂಕ 31.10.2025 ರ ಒಳಗಾಗಿ ಸಮೀಕ್ಷೆಯನ್ನು ಪೂರ್ಣಗೊಳಿಸಿ ಉಡುಪಿ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಂಪೂರ್ಣಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading