ಬೈಂದೂರು ಪೊಲೀಸ್ ಠಾಣಾ ವತಿಯಿಂದ ಸೈಬರ್ ಅಪರಾಧ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮ ವನ್ನು ಬೈಂದೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಯಿತು
ಕಾರ್ಯಕ್ರಮದಲ್ಲಿ ಬೈಂದೂರು ಪೊಲೀಸ್ ಠಾಣಾ ಅಧಿಕಾರಿ ತಿಮ್ಮೇಶ್ ಬಿ. ರವರು ಮಾತನಾಡಿ ಸೈಬರ್ ಅಪರಾಧ, ಸೈಬರ್ ಅಪರಾಧದ ಸ್ವರೂಪ ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಮಗೆ ಅರಿವಿದ್ದಾಗ ಅಂತ ಸಂದರ್ಭದಲ್ಲಿ ನಮ್ಮೊಳಗೆ ಜಾಗೃತ ಭಾವ ಮೂಡುತ್ತದೆ ಎಂದರು

ನಂತರ ಪಿ ಎಸ್ ಐ(ತನಿಖಾ) ನವೀನ್ ಬೋರಕರ್ರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿದರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು
NDPS ಕಾಯ್ದೆಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಘಟಕದಿಂದ ಹೊರತಂದಿರುವ QR ಕೋಡ್ ಕಾರ್ಯನಿರ್ವಹಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದ್ದು. ಕಾರ್ಯಕ್ರಮದಲ್ಲಿ ಸದ್ರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾಗರಾಜ್ ಶೆಟ್ಟಿ ರವರು ಹಾಗೂ ಕಾಲೇಜನಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

