ಬೈಂದೂರು ತಾಲೂಕಿನ 55 ಅರ್ಹ ಫಲಾನುಭವಿಗಳಿಗೆ ಶಾಸಕರಿಂದ ಹಕ್ಕುಪತ್ರ ವಿತರಣೆ

ಬೈಂದೂರು ತಾಲೂಕು ಕಚೇರಿಯಲ್ಲಿ ಬೈಂದೂರು ಹೋಬಳಿಯ 9 ಗ್ರಾಮಗಳ ಸುಮಾರು 55 ಅರ್ಹ ಬಡ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕು ಪತ್ರ ಶಾಸಕ ಗುರುರಾಜ್ ಶೆಟ್ಟಿ ಗಂಟೆ ಹೊಳೆಯ ಸಮ್ಮುಖದಲ್ಲಿ ವಿತರಿಸಲಾಯಿತು. ಬೈಂದೂರು ಹೋಬಳಿಯ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗಿದೆ.
ಈ ಹಿಂದೆ ನಡೆಸಿದ ಸಂಪರ್ಕ ಸಭೆಯಲ್ಲಿ ಜನರ ಬಳಿ ಅಧಿಕಾರಿಗಳನ್ನು ಕರೆದುಕೊಂಡು ಹೋದ ಪರಿಣಾಮ ಸಣ್ಣ ಪುಟ್ಟ ನ್ಯೂನತೆ ಇರುವ ಕಡಗಳನ್ನು ಸರಿಪಡಿಸಿ ಅರ್ಹರನ್ನು ಹುಡುಕಿ ಭೂಮಿ ಹಕ್ಕು ನೀಡುವ ಕೆಲಸವಾಗಿದೆ. ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟೆ ಹೊಳೆ ಹೇಳಿದರು.
ತಹಶೀಲ್ದಾರ್ ರಾಮಚಂದ್ರಪ್ಪ ಕಂದಾಯ ನಿರೀಕ್ಷಕ ಉಪೇಂದ್ರ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading