ಭಾರತದ ಚುನಾವಣಾ ಆಯೋಗವು ರಾಜ್ಯದಲ್ಲಿ ಇಂದಿನಿಂದ ಒಂದು ತಿಂಗಳ ಕಾಲ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮಾಡಲಿದೆ. ಈಗಾಗಲೇ ಮ್ಯಾಪಿಂಗ್ ಮುಕ್ತಾಯವಾಗಿದ್ದು ಚುನಾವಣಾ ಅಧಿಕಾರಿಗಳು ಬಿ ಎಲ್ ಓ ಗಳು ಮನೆ ಮನೆಗೆ ಭೇಟಿ ಕೊಡಲಿದ್ದಾರೆ.
ಕರ್ನಾಟಕದಲ್ಲಿ ಸುಮಾರು 91.61% ಮ್ಯಾಪಿಂಗ್ ಆಗಿದ್ದು ಇನ್ನುಳಿದ ಕೆಲವು ಮತದಾರರ ಮ್ಯಾಪಿಂಗ್ ಆಗಬೇಕಿದೆ.
ನಕಲಿ ಮತ್ತು ಅನರ್ಹ ಮತದಾರರನ್ನು ಹಿಡಿದು ಪಟ್ಟಿಯಿಂದ ಡಿಲೀಟ್ ಮಾಡಲಿದೆ. ಬಿ ಎಲ್ ಓ ಗಳು ಮನೆಗೆ ಭೇಟಿ ನೀಡಿ ಎಸ್ಐಆರ್ ಅರ್ಜಿ ನೀಡಲಿದ್ದಾರೆ, ಎಲ್ಲ ಮತದಾರರು ತಮ್ಮ ಪಾಸ್ ಪೋರ್ಟ್ ಅಳತೆಯ ಕಲರ್ ಫೋಟೋ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಅಥವಾ ಜನ್ಮ ದಿನಾಂಕ ಯಾವುದಾದರೂ ದೃಢೀಕೃತ ದಾಖಲೆಗಳನ್ನು ಸಿದ್ಧಪಡಿಸಿ ಬಿಎಲ್ಒಗಳಿಗೆ ನೀಡುವುದು.
ಎಸ್ ಐ ಆರ್ ನಲ್ಲಿ ಭಾಗಿಯಾಗಿ ಮಾಹಿತಿ ನೀಡಿದರೆ ಮಾತ್ರ ಮತದಾನದ ಹಕ್ಕು ಇಲ್ಲದೇ ಹೋದರೆ ಮತದಾನದಿಂದ ವಂಚಿತರಾಗುವ ಸಾಧ್ಯತೆ ಇದೆ, ಹಾಗೆ ಅಕ್ಟೋಬರ್ 2026ಕ್ಕೆ 18 ತುಂಬ ಯುವ ಮತದಾರರು ಸಹಿತ ಅರ್ಜಿ ಸಲ್ಲಿಸಬಹುದಾಗಿದೆ.

