ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20 ಮತ್ತು 21 ರಂದು ಮಳೆ ತೀವ್ರಗೊಳ್ಳಲಿದ್ದು, ಈ ಭಾಗಕ್ಕೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಗುಡುಗು ಮತ್ತು ಮಿಂಚಿನ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ. ಸಾರ್ವಜನಿಕರು ಮತ್ತು ಪ್ರವಾಸಿಗರು ಜಾಗರೂಕರಾಗಿರಲು ಸೂಚಿಸಲಾಗಿದೆ
ಬೆಂಗಳೂರು ನಗರ (Bengaluru Urban) ಮತ್ತು ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಗಳಲ್ಲಿ ನಾಳೆಯಿಂದ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಹೆಚ್ಚಿನ ವಿವರಗಳಿಗಾಗಿ ನೀವು ಭಾರತೀಯ ಹವಾಮಾನ ಇಲಾಖೆಯ (IMD Bengaluru) ಅಧಿಕೃತ ಜಾಲತಾಣವನ್ನು ಪರಿಶೀಲಿಸಬಹುದು

